ಎ.ಪಿ.ಜೆ.ಅಬ್ದುಲ್ ಕಲಾಂ

From IndicWiki Sandbox

Template:Cleanup Template:Infobox Officeholder

ಐಐಟಿ ಗುವಾಹಟಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತಿರುವ ಡಾ. ಅಬ್ದುಲ್ ಕಲಾಂ

ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.


ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು. ಅಧ್ಯಯನ ನಂತರ ನಾಲ್ಕು ದಶಕಗಳ ಕಾಲ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಅರ್.ಡಿ.ಓ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ವಿಜ್ಞಾನಿ ಮತ್ತು ವಿಜ್ಞಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದರು.ಭಾರತದ ನಾಗರಿಕ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ಕ್ಷಿಪಣಿ ಅಭಿವೃದ್ಧಿ ಪ್ರಯತ್ನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕ್ಷಿಪಣಿ ಮತ್ತು ಉಡಾವಣಾ ತಂತ್ರಜ್ಞಾನದ ಅಭಿವೃದ್ಧಿಯ ಅಧ್ಯಯನದಿಂದ, ಇವರು ಭಾರತದ ಕ್ಷಿಪಣಿ ಮಾನವ ಎಂಬ ಹೆಸರಿನಿಂದ ಚಿರಪರಿಚಿತರಾಗಿದ್ದರು. ೧೯೯೮ರಲ್ಲಿ ನೆಡೆದ ಭಾರತದ ಪೋಖ್ರಾನ್-೨ ಪರಮಾಣು ಪರೀಕ್ಷೆಯಲ್ಲಿ ಸಾಂಸ್ಥಿಕವಾಗಿ, ತಾಂತ್ರಿಕವಾಗಿ ಮತ್ತು ರಾಜಕೀಯವಾಗಿ ಒಂದು ಪ್ರಮುಖ ಪಾತ್ರ ವಹಿಸಿದರು. ಅವರು ಸ್ಇಎಕ್ಸ್ದು ಮಾದು ೯೭೪ರಲ್ಲಿ ನಡೆದ ಮೂಲ ಪರಮಾಣು ಪರೀಕ್ಷೆಯ ನಂತರ ನೆಡೆದ ಮೊದಲ ಪರಮಾಣು ಮಾಡುಯತಿದ ಎಮ್ದ್ದ 51 ನ್ನು xಗಿದೆ. ಕಲಾಂ ಅವರು ೨೦೦೨ ರಲ್ಲಿ, ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷ ಮತ್ತು ವಿರೋಧ ಪಕ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಎರಡು ಪಕ್ಷಗಳ ಬೆಂಬಲದೊಂದಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾದರು.ಐದು ವರುಷಗಳ ಅವಧಿ ಪೂರೈಸಿದ ನಂತರ, ಅವರು ಶಿಕ್ಷಣ, ಬರವಣಿಗೆ ಮತ್ತು ಸಾರ್ವಜನಿಕ ಸೇವೆಯ ಜೀವನಕ್ಕೆ ಮರಳಿದರು. ಅವರು ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದರು. ಅಬ್ದುಲ್ ಕಲಾಂ ಅವರನ್ನ ಭಾರತದ ಮಿಸೈಲ್ ಮ್ಯಾನ್ ಆಫ್ ಇಂಡಿಯ ಎಂದು ಕರೆಯುತ್ತಾರೆ

ಬಾಲ್ಯ ಜೀವನ ಮತ್ತು ವಿದ್ಯಾಭ್ಯಾಸ[edit | edit source]

  • ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಅವರು  ತಮಿಳುನಾಡು ರಾಜ್ಯದ ರಾಮೇಶ್ವರಂನಲ್ಲಿ, ೧೫ ಅಕ್ಟೋಬರ್ ೧೯೩೧ ರಂದು ತಮಿಳು ಮುಸ್ಲಿಂ ಕುಟುಂಬದಲ್ಲಿ ಜನಿಸಿದರು. ಅವರ ತಂದೆಯ ಹೆಸರು ಜೈನುಲಬ್ದೀನ್, ಅವರು ದೋಣಿ ಮಾಲೀಕರಾಗಿದ್ದರು. ತಾಯಿ ಅಶಿಮಾ ಗೃಹಿಣಿಯಾಗಿದ್ದರು. ಕಲಾಂ ಅವರ ತಂದೆ, ಈಗ ನಿರ್ನಾಮವಾದ ಧನುಷ್ಕೋಡಿ ಮತ್ತು ರಾಮೇಶ್ವರಂ ನಡುವೆ ತಮ್ಮ ದೋಣಿಯಲ್ಲಿ ಹಿಂದು ಭಕ್ತಾದಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. *ಕಲಾಂ ಅವರು ಕುಟುಂಬದ ನಾಲ್ಕು ಜನ ಸಹೋದರರು ಮತ್ತು ಒಬ್ಬ ಸಹೋದರಿಯಲ್ಲಿ ಅತ್ಯಂತ ಕಿರಿಯರಾಗಿದ್ದರು. ಅವರು ಬಡ ಹಿನ್ನೆಲೆಯಿಂದ ಬಂದವರು ಮತ್ತು ತನ್ನ ಕುಟುಂಬಕ್ಕೆ ಆರ್ಥಿಕವಾಗಿ ಬೆಂಬಲಿಸುವ ಸಲುವಾಗಿ, ಕಿರಿಯ ವಯಸ್ಸಿನಲ್ಲೇ ಕೆಲಸ ಆರಂಭಿಸಿದರು. ತಮ್ಮ ತಂದೆ ಗೆ ಆರ್ಥಿಕವಾಗಿ ಸಹಾಯ ಮಾಡಲು, ಅವರು ಶಾಲೆಯ ನಂತರ ತಮ್ಮ ಸಂಸೂದ್ದಿನ ಕಲಾಂ ಜೊತೆಗೆ ಪತ್ರಿಕೆಗಳನ್ನು ವಿತರಣೆ ಮಾಡುತ್ತಿದ್ದರು. ಇವರ ಬಾಲ್ಯವು ಬಹಳ ಬಡತನದಿಂದ ಕೂಡಿತ್ತು.
  • ಮುಂಜಾನೆ ೪:೦೦ ಘಂಟೆಗೆ ಎದ್ದು ದಿನದ ಪಾಠಗಳನ್ನು ಓದಿ ಶಾಲೆಗೆ ಹೋಗುತ್ತಿದ್ದರು. ಅವರು ಶಾಲೆಯಲ್ಲಿದ್ದಾಗ ಒಬ್ಬ ಸಾಧಾರಣ ವಿಧ್ಯಾರ್ಥಿಯಾಗಿದ್ದರು, ಆದರೆ ಚುರುಕಾದ ಮತ್ತು ಕಠಿಣ ಪರಿಶ್ರಮ ಪಡುವ ವಿಧ್ಯಾರ್ಥಿಯಾಗಿದ್ದರು. ಅವರಿಗೆ ಗಣಿತದಲ್ಲಿ ವಿಶೇಷ ಆಸಕ್ತಿ ಇತ್ತು. ಅವರು ಗಣಿತವನ್ನು ಗಂಟೆಗಳ ಅಧ್ಯಯನ ಮಾಡುತ್ತಿದ್ದರು.
  • ಅವರು ರಾಮನಾಥಪುರಂ ಶ್ವಾರ್ಟ್ಜ್ ಮೆಟ್ರಿಕ್ಯುಲೇಷನ್ಶಾ ಶಾಲೆಯಲ್ಲಿ ಶಿಕ್ಷಣ ಮುಗಿಸಿದ ನಂತರ ತಿರುಚಿರಾಪಳ್ಳಿಯಲ್ಲಿ ಕಲಾಂ ಸೇಂಟ್ ಜೋಸೆಫ್ಸ್ ಕಾಲೇಜಿಗೆ ಸೇರಿಕೊಂಡರು. ೧೯೫೪ರಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಪದವಿಯನ್ನು ಪಡೆದರು.
  • ಕೋರ್ಸ್ ಕೊನೆಯಲ್ಲಿ ಅವರಿಗೆ ವಿಷಯದ ಬಗ್ಗೆ ಉತ್ಸಾಹ ಕಡಿಮೆಯಾಗುತ್ತಾ ಬಂತು ಮತ್ತು ವಿಷಯವನ್ನು ನಾಲ್ಕು ವರುಷಗಳ ಕಾಲ ಅಧ್ಯಯನ ಮಾಡಿದಕ್ಕೆ ಆಮೇಲೆ ಪಶ್ಚಾತಾಪ ಪಟ್ಟರು. ಅವರು ಮದ್ರಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರಿಕ್ಷಯಾನ ಇಂಜಿನಿಯರಿಂಗ್ ಓದಲು ಮದ್ರಾಸ್ಗೆ ತೆರಳಿದರು.
  • ಕಲಾಂ ಅವರು ಕೆಲಸ ಮಾಡುತ್ತಿದ್ದಾಗ ಹಿರಿಯ ವರ್ಗದ ಯೋಜನೆಯ ಪ್ರಗತಿ ಬಗ್ಗೆ ಡೀನ್ ಅವರು ಅತೃಪ್ತಿ ವ್ಯಕ್ತಪಡಿಸಿ, ಇನ್ನೂ ಮೂರು ದಿನಗಳಲ್ಲಿ ಯೋಜನೆ ಮುಗಿಸದಿದ್ದರೆ, ಅವರ ವಿದ್ಯಾರ್ಥಿವೇತನ ರದ್ದು ಮಾಡುವ ಬೆದೆರಿಕೆ ಹಾಕಿದರು, ಕಲಾಂ ಅವರು ಡೀನ್ ಕೊಟ್ಟ ಗಡುವಿನಲ್ಲಿ ಯೋಜನೆ ಪೂರೈಸಿದರು.
  • ಅವರ ಕೆಲಸದಿಂದ ಪ್ರಭಾವಿತರಾದ ಡೀನ್ ಅವರು "ನಾನು ನಿನ್ನ ಮೇಲೆ ಹೆಚ್ಚು ಒತ್ತಡ ಹಾಕಿ ಕಠಿಣವಾದ ಗಡುವಿನಲ್ಲಿ ಕೆಲಸ ಪೂರೈಸಲು ಹೇಳಿದ್ದೆ" ಎಂದು ಹೇಳಿದರು. ಎಂಟು ಸ್ಥಾನಗಳು ಖಾಲಿ ಇದ್ದ ಭಾರತೀಯ ವಾಯುಪಡೆಯಾ ಅರ್ಹತಾ ಸುತ್ತಿನಲ್ಲಿ ಒಂಬತ್ತನೆಯ ಸ್ಥಾನ ಪಡೆದದ್ದರಿಂದ, ಯುದ್ದ ವಿಮಾನದ ಚಾಲಕನಾಗುವ ಅವರ ಕನಸಿನ ಅವಕಾಶ ತಪ್ಪಿಹೋಯಿತು.

ವೃತ್ತಿಜೀವನ[edit | edit source]

ವಿಜ್ಞಾನಿಯಾಗಿ[edit | edit source]

Template:Quote box

  • ೧೯೬೦ರಲ್ಲಿ ಮದ್ರಾಸ್ ತಾಂತ್ರಿಕ ಮಹಾವಿದ್ಯಾಲಯದಿಂದ ಪದವಿ ಪಡೆದ ನಂತರ ಕಲಾಂ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಅರ್.ಡಿ.ಓ) ನ ವಾಯುಯಾನವಿಜ್ಞಾನ ಅಭಿವೃದ್ಧಿ ವಿಭಾಗಕ್ಕೆ ಒಬ್ಬ ವಿಜ್ಞಾನಿಯಾಗಿ ಸೇರಿಕೊಂಡರು. ಅಲ್ಲಿ ಅವರು ತಮ್ಮ ವೃತ್ತಿ ಜೀವನದ ಪ್ರಾರಂಭದಲ್ಲಿ ಭಾರತದ ಭೂ ಸೇನೆಗೆ ಸಣ್ಣ ಹೆಲಿಕಾಪ್ಟರ್ ಗಳನ್ನು ವಿನ್ಯಾಸ ಮಾಡುತ್ತಿದ್ದರು, ಆದರೆ ಅವರಿಗೆ ತಾವು ಡಿ.ಅರ್.ಡಿ.ಓ ನಲ್ಲಿ ಆಯ್ತುಕೊಂಡ ಕೆಲಸದ ಬಗ್ಗೆ ಅಸಮಾಧಾನ ಇತ್ತು.
  • ಕಲಾಂ ಅವರು ಹೆಸರಾಂತ ಬಾಹ್ಯಾಕಾಶ ವಿಜ್ಞಾನಿ ವಿಕ್ರಂ ಸಾರಾಭಾಯ್ ಅವರ ಅಡಿಯಲ್ಲಿದ್ದ ಇನ್ಕೋಸ್ಪಾರ್ ಸಮಿತಿಯ ಭಾಗವಾಗಿದ್ದರು. ೧೯೬೯ರಲ್ಲಿ ಕಲಾಂ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವರ್ಗಾಯಿಸಲಾಯಿತು. ಅಲ್ಲಿ ಅವರು ರೋಹಿಣಿ ಉಪಗ್ರಹವನ್ನು ೧೯೮೦ರಲ್ಲಿ ಭೂಮಿಯ ಕಕ್ಷೆಯನ್ನು ಸೇರಿಸಿದರು.
  • ಭಾರತದ ಮೊದಲ ಉಪಗ್ರಹ ಉಡಾವಣಾ ವಾಹನ (ಎಸ್.ಎಲ್.ವಿ-೩) ರ ಯೋಜನ ನಿರ್ದೇಶಕರಾದರು. ೧೯೬೫ರಲ್ಲಿಯೇ ಕಲಾಂ ಅವರು ವಿಸ್ತರಿಸಬಲ್ಲ ರಾಕೆಟ್ ಯೋಜನೆಯನ್ನು ಪ್ರತ್ಯೇಕವಾಗಿ ಆರಂಭಿಸಿದರು. ೧೯೬೯ರಲ್ಲಿ ಈ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿತು, ಅವರು ಆಗ ಈ ಯೋಜನೆಯನ್ನು ವಿಸ್ತರಿಸಿ, ಹಲವು ಇಂಜಿನಿಯರ್‍ಗಳನ್ನು ಈ ಯೋಜನೆಗೆ ಸೇರಿಸಿಕೊಂಡರು.
  • ೧೯೬೩-೬೪ರಲ್ಲಿ ಕಲಾಂ ಅವರು ಹ್ಯಾಮ್ಟನ್ ವರ್ಜೀನಿಯಾದ, ನಾಸಾದ ಲ್ಯಾಂಗ್ಲೀ ಸಂಶೋಧನಾ ಕೇಂದ್ರ , ಗ್ರೀನ್ ಬೆಲ್ಟ್ , ಮೇರಿಲ್ಯಾಂಡ್ ನ ಗೊಡಾರ್ಡ್ ಬಾಹ್ಯಾಕಾಶ ಹಾರಾಟ ಕೇಂದ್ರ ಮತ್ತು ವಾಲೋಪ್ಸ್ ಯುದ್ದ ವಿಮಾನ ಫೆಸಿಲಿಟಿಗೆ ಬೇಟಿ ನೀಡಿದ್ದರು. ೧೯೭೦ ಮತ್ತು ೧೯೮೦ ರ ನಡುವೆ ಕಲಾಂ ಅವರು ಪೋಲಾರ್ ಉಪಗ್ರಹ ವಾಹನ (ಪಿ.ಎಸ್.ಎಲ್.ವಿ) ಮತ್ತು ಎಸ್.ಎಲ್.ವಿ-೩ ಯೋಜನೆಗಳನ್ನು ಅಭಿವೃದ್ಧಿ ಪಡಿಸುವ ಪ್ರಯತ್ನ ಮಾಡಿದರು.
  • ಮುಂದಿನ ದಿನಗಳಲ್ಲಿ ಈ ಯೋಜನೆಗಳು ಯಶಸ್ವಿಯಾದವು. ದೇಶದ ಮೊದಲ ಪರಮಾಣು ಪರೀಕ್ಷೆ 'ನಗುವ ಬುದ್ಧ' ಯೋಜನೆಯ ಅಭಿವೃದ್ದಿಯಲ್ಲಿ ಕಲಾಂ ಅವರು ಭಾಗಿಯಾಗಿರಲಿಲ್ಲ. ಆದರೂ ಸಹ ಪರಮಾಣು ಪರೀಕ್ಷೆಯನ್ನು ಟಿ.ಅರ್.ಬಿ.ಎಲ್. ಪ್ರತಿನಿಧಿಯಾಗಿ ವೀಕ್ಷಿಸಲು ಡಾ. ರಾಜಾರಾಮಣ್ಣನವರು ಆಹ್ವಾನಿಸಿದರು.

Template:Quote box

ರಾಷ್ಟ್ರಪತಿಯಾಗಿ[edit | edit source]

  • ಕಲಾಂರವರು ಭಾರತದ 11ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. 2002ರ ರಾಷ್ಟ್ರಪತಿ ಚುನಾವಣೆಯಲ್ಲಿ ಲಕ್ಷ್ಮೀ ಸೆಹೆಗಲ್ ವಿರುದ್ಧ ೧೦೭,೩೬೬ ಮತಗಳ ಮುನ್ನಡೆಯಲ್ಲಿ ಗೆದ್ದರು. 22 ಜುಲೈ 2002ರಿಂದ 22 ಜುಲೈ 2007ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.[2]ಅ ಸರಳತೆ, ಪ್ರಾಮಾಣಿಕತೆ, ಮತ್ತು ಮೇಧಾವಿತನದ ಸಾಕಾರದಂತಿರುವ ಕಲಾಂ ಅವರು ರಾಷ್ಟ್ರಪತಿ ಹುದ್ದೆಯ ಘನತೆಯನ್ನು ಹೆಚ್ಚಿಸಿದರು. ಜನಸಾಮಾನ್ಯರ ರಾಷ್ಟ್ರಪತಿ ಎಂಬ ಕೀರ್ತಿಗೆ ಪಾತ್ರರಾದರು. ಸ್ವತಃ ಬ್ರಹ್ಮಚಾರಿ ಆದ ಇವರಿಗೆ ಮಕ್ಕಳೆಂದರೆ ಬಹು ಪ್ರೀತಿ. ಮಕ್ಕಳೊಂದಿಗೆ ಬೆರೆತು ಉಪಯುಕ್ತ ಸಲಹೆ ಸೂಚನೆ ನೀಡುವುದು ಇವರ ಪ್ರಿಯ ಹವ್ಯಾಸ.

ಲೇಖಕರಾಗಿ[edit | edit source]

ರಾಷ್ಟ್ರಪತಿ ಹುದ್ದೆಯಿಂದ ವಿರಮಿಸಿದ ಅನಂತರವೂ ಇವರು ಜನಪ್ರಿಯ ಧುರೀಣರು ಮತ್ತು ವಿಜ್ಞಾನಿಯಾಗಿ ಕಂಗೊಳಿಸುತ್ತಿದ್ದಾರೆ. ಇವರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ‘ವಿಂಗ್ಸ್‌ ಆಫ್ ಫೈರ್’ ಎಂಬುದು ಇವರ ಆತ್ಮಕಥೆ. ಇವರು ತಮ್ಮ ‘ಇಂಡಿಯಾ ಮೈ ಡ್ರೀಮ್’, ‘ಇಂಡಿಯಾ ೨೦೨೦’ ಎಂಬ ಗ್ರಂಥಗಳಲ್ಲಿ ಭವ್ಯ ಭಾರತ ನಿರ್ಮಾಣದ ಬಗ್ಗೆ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದಾರೆ. ‘ಮೈ ಜರ್ನಿ’, ‘ಟಾರ್ಗೆಟ್ ತ್ರಿ ಬಿಲಿಯನ್’- ಇವು ಇವರ ಇತ್ತೀಚಿನ ಕೃತಿಗಳು. ಅಪ್ರತಿಮ ದೇಶಭಕ್ತರೂ ಉತ್ತಮ ವಾಗ್ಮಿಯೂ ಆಗಿರುವ ಕಲಾಂ ಅವರು ದೇಶ ವಿದೇಶಗಳಲ್ಲಿ ಸಂಚರಿಸುತ್ತ ಜ್ಞಾನ-ವಿಜ್ಞಾನ ಪ್ರಸಾರದಲ್ಲಿ ತಮ್ಮ ಸಹಾಯಹಸ್ತ ನೀಡುತ್ತಿದ್ದಾರೆ.

ಪ್ರಶಸ್ತಿಗಳು ಮತ್ತು ಗೌರವಗಳು[edit | edit source]

ವಿಐಎಮ್ಎಸ್ ನಲ್ಲಿ ಅಬ್ದುಲ್ ಕಲಾಂ ರವರ ಪ್ರತಿಮೆ
ಪ್ರಶಸ್ತಿ ಅಥವಾ ಗೌರವದ ವರ್ಷ ಪ್ರಶಸ್ತಿ ಅಥವಾ ಗೌರವದ ಹೆಸರು ಗೌರವಿಸಿದ ಸಂಸ್ಥೆ
೨೦೧೪ ಡಾಕ್ಟರ್ ಆಫ್ ಸೈನ್ಸ್ ಎಡಿನ್‌ಬರ್ಗ್ ವಿಶ್ವವಿದ್ಯಾಲಯ, ಯೂ.ಕೆ[3]
೨೦೧೨ ಡಾಕ್ಟರ್ ಆಫ್ ಲಾ (ಆನರಿಸ್ ಕೌಸಾ) ಸೈಮನ್ ಫೇಸರ್ ವಿಶ್ವವಿದ್ಯಾಲಯ[4]
೨೦೧೧ ಐಇಇಇ ಗೌರವ ಸದಸ್ಯತ್ವ ಐಇಇಇ [5]
೨೦೧೦ ಡಾಕ್ಟರ್ ಆಫ್ ಇಂಜಿನಿಯರಿಂಗ್ ವಾಟರ್ಲೂ ವಿಶ್ವವಿದ್ಯಾಲಯದ[6]
೨೦೦೯ ಗೌರವ ಡಾಕ್ಟರೇಟ್ ಓಕ್ಲ್ಯಾಂಡ್ ವಿಶ್ವವಿದ್ಯಾಲಯ[7]
೨೦೦೯ ಹೂವರ್ ಮೆಡಲ್ ಎ.ಎಸ್.ಎಮ್.ಇ ಫೌಂಡೇಶನ್, ಯುಎಸ್ಎ[8]
೨೦೦೯ ಇಂಟರ್ನ್ಯಾಷನಲ್ ವೊನ್ ಕಾರ್ಮಾನ್ ವಿಂಗ್ಸ್ ಪ್ರಶಸ್ತಿ ಕ್ಯಾಲಿಫೋರ್ನಿಯಾ ಇನ್ಸ್ಟಿಟ್ಯೂಟ್ ಟೆಕ್ನಾಲಜಿ, ಯುಎಸ್ಎ [9]
೨೦೦೮ ಡಾಕ್ಟರ್ ಆಫ್ ಇಂಜಿನಿಯರಿಂಗ್ (ಆನರಿಸ್ ಕೌಸಾ) ನನ್ಯಾಂಗ್ ತಾಂತ್ರಿಕ ವಿಶ್ವವಿದ್ಯಾಲಯ, ಸಿಂಗಪುರ್[10]
೨೦೦೭ ಕಿಂಗ್ ಚಾರ್ಲ್ಸ್ II ಪದಕ ರಾಯಲ್ ಸೊಸೈಟಿ, ಯೂ.ಕೆ.[11][12][13]
೨೦೦೭ ಸೈನ್ಸ್ ಗೌರವ ಡಾಕ್ಟರೇಟ್ ವಾಲ್ವರ್ಹ್ಯಾಂಪ್ಟನ್ ವಿಶ್ವವಿದ್ಯಾಲಯ, ಯೂ.ಕೆ., UK[14]
೨೦೦೦ ರಾಮಾನುಜನ್ ಪ್ರಶಸ್ತಿ ಅಲ್ವಾರ್ ಸಂಶೋಧನಾ ಕೇಂದ್ರ, ಚೆನೈ[15]
೧೯೯೮ ವೀರ್ ಸಾವರ್ಕರ್ ಪ್ರಶಸ್ತಿ ಭಾರತ ಸರ್ಕಾರ[16]
೧೯೯೭ ದೇಶದ ಐಕ್ಯತೆಯ ಇಂದಿರಾಗಾಂಧಿ ಪ್ರಶಸ್ತಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
೧೯೯೭ ಭಾರತ ರತ್ನ ಭಾರತ ಸರ್ಕಾರ [17]
೧೯೯೪ ಡಿಸ್ಟಿಂಗ್ವಿಶ್ಡ್ ಫೆಲೋ ನಿರ್ದೇಶಕರ ಸಂಸ್ಥೆ (ಭಾರತ)[18]
೧೯೯೦ ಪದ್ಮ ವಿಭೂಷಣ ಭಾರತ ಸರ್ಕಾರ[15][19]
೧೯೮೧ ಪದ್ಮ ಭೂಷಣ ಭಾರತ ಸರ್ಕಾರ[15][19]

ಇವರ ಪುಸ್ತಕಗಳು[edit | edit source]

  1. ಡೆವೆಲಪ್ಮೆಂಟ್ಸ್ ಇನ್ ಫ್ಲುಯಿಡ್ ಮೆಖಾನಿಕ್ಸ್ ಅಂಡ್ ಸ್ಪೇಸ್ ಟೆಕ್ನಾಲಜಿ-ರೊಡ್ಡಂ ನರಸಿಂಹರವರ ಜತೆ ಬರೆದಿರುವ ವೈಜ್ಞಾನಿಕ ಪುಸ್ತಕ.[20]
  2. ವಿಂಗ್ಸ್ ಆಫ್ ಫೈಯರ್ (ಕನ್ನಡ ಅನುವಾದ - ಅಗ್ನಿಯ ರೆಕ್ಕೆಗಳು)-ಅರುಣ್ ತಿವಾರಿಯವರ ಜತೆ ಬರೆದ ಈ ಪುಸ್ತಕವು ಇವರ ಆತ್ಮಕಥೆಯಾಗಿದ್ದು, ಇವರ ಸರಳ ಹಾಗೂ ಮಾದರಿ ಜೀವನದ ಅನೇಕ ಘಟನೆಗಳನ್ನು ಓದುಗರಿಗೆ ತೆರೆದಿಡುತ್ತದೆ. ಇಂದಿನ ಯುವ ಪೀಳಿಗೆಗೆ ಇದೊಂದು ಅನುರೂಪವಾದ ಮಾರ್ಗದರ್ಶಿ.[21]
  3. ಇಂಡಿಯಾ 2020- ಈ ಪುಸ್ತಕದಲ್ಲಿ ಕಲಾಮ್ ರವರು 2020 ನೇ ಇಸವಿಯಲ್ಲಿ ಭಾವಿ ಭಾರತವು ಹೇಗಿರಬೇಕೆಂದು ತಮ್ಮ ಕನಸನ್ನು ಬಿಚ್ಚಿಡುತ್ತಾರೆ. ಯುವ ಜನಾಂಗಕ್ಕೆ ಸ್ಪೂರ್ತಿಯಾಗಬಲ್ಲಂತಹ ಕೃತಿ.[22]
  4. ಇಗ್ನೈಟೆಡ್ ಮೈಂಡ್ಸ್- ಮಕ್ಕಳಿಗಾಗಿ ಬರೆದಿರುವ ಈ ಪುಸ್ತಕವು ಅವರು ಮುಂದಿನ ನಾಗರೀಕರಾಗಿದ್ದು ದೇಶವನ್ನು ಹೇಗೆ ಬೆಳಸಬಹುದು ಎಂದು ಹೇಳುತ್ತದೆ.[23]
  5. ಎನ್ವಿಶನಿಂಗ್ ಅನ್ ಎಂಪವರ್ಡ್ ನೇಷನ್-ಸಾಮಾಜಿಕ ಬದಲಾವಣೆಗಾಗಿ ತಂತ್ರಜ್ಞಾನದ ಬಗ್ಗೆ ಎ.ಶಿವತನು ಪಿಳ್ಳೈರವರ ಜತೆ ಬರೆದಿರುವ ಪುಸ್ತಕ.[24]
  6. ಮೈ ಜರ್ನೀ- ಇದು ಅವರ ಎರಡನೇ ಆತ್ಮಕಥೆ. ಇಲ್ಲಿ ಅವರ ಜೀವನದ ಇಷ್ಟ-ಕಷ್ಟಗಳ ಬಗ್ಗೆ ಹೇಳಿದ್ದಾರೆ. ಇದನ್ನು ವಿ.ಸತ್ಯನಾರಾಯಣ ಮೂರ್ತಿ ಪ್ರಕಟಿಸಿದ್ದಾರೆ.[25]
  7. ದಿ ಲೈಫ್ ಟ್ರೀ - ಕಲಾಂ ಅವರು ಬರೀ ವಿಜ್ಞಾನಿಯಲ್ಲದೆ ಒಳ್ಳೆಯ ಕವಿಯೂ ಆಗಿದ್ದಾರೆ. ದಿ ಲೈಫ್ ಟ್ರೀ ಅವರ ಕವನ ಸಂಕಲನವಾಗಿದ್ದು ವಿಜ್ಞಾನ ಮತ್ತು ಸಾಹಿತ್ಯವನ್ನು ಒಂದು ಮಾಡುವ ಪುಸ್ತಕ ಇದು. ಇವರ ಕವನಗಳು ಇವರ ದೇಶಭಕ್ತಿ ಹಾಗು ಮಾತೃಭಕ್ತಿಯನ್ನು ತೋರಿಸುತ್ತದೆ ಮತ್ತು ದೇವರ ಮೇಲೆ ಇವರಿಗಿರುವ ಶ್ರದ್ಧಾ ಭಕ್ತಿಯನ್ನು ತೋರಿಸುತ್ತದೆ.[26]
  8. ಚಿಲ್ರೆನ್ ಆಸ್ಕ್ ಕಲಾಂ-ಮಕ್ಕಳು ಕಲಾಂರವರಿಗೆ ಬರೆದ ಪತ್ರಗಳ ಪ್ರಶ್ನೆಗಳಿಗೆ ಪ್ರತ್ಯುತ್ತರ ಪತ್ರಗಳ ಸಂಕಲನ ಈ ಪುಸ್ತಕ. ಇದರಲ್ಲಿ ಮಕ್ಕಳ ವಿಷಯಗಳು, ಭಾರತೀಯತೆ, ವಿದ್ಯಾಭ್ಯಾಸ, ಸಾಮಾನ್ಯ ವಿಷಯಗಳು, ವಿಜ್ಞಾನ ಮತ್ತು ಆಧ್ಯಾತ್ಮದ ಬಗ್ಗೆ ಮಕ್ಕಳಿಗೆ ತಿಳಿಸುತ್ತದೆ.[27]

ಮರಣ[edit | edit source]

  • ಡಾ.ಅಬ್ದುಲ್ ಕಲಾಂರವರು,[28] ಜುಲೈ 27, 2015 ರಂದು ಶಿಲ್ಲಾಂಗ್ ನಲ್ಲಿ ಉಪನ್ಯಾಸ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.[29] ಕೊನೆಯ ಉಸಿರು ಇರುವವರೆಗೂ ಅವರು ಸೇವೆಯಲ್ಲಿ ನಿರತರಾಗಿದ್ದು, ಇಡೀ ದೇಶದ ಜನತೆಗೆ ಮಾದರಿಯ ವ್ಯಕ್ತಿತ್ವ ಹೊಂದಿದವರಾಗಿದರು.
  • ೩೦,ಜುಲೈ, ೨೦೧೫ ರಂದು, ಡಾ.ಕಲಾಂ ಹುಟ್ಟಿಬೆಳೆದ ತಮಿಳುನಾಡಿನ ರಾಮೇಶ್ವರಂ ಊರಿನಲ್ಲಿ ಅವರ ಅಂತಿಮಕ್ರಿಯೆ, ಸಕಲ ರಾಷ್ಟ್ರೀಯ ಗೌರವಗಳೊಂದಿಗೆ ನಡೆಯಿತು. [30]this is helpful to us ,use it .

ಡಾ.ಕಲಾಂ ಬಗ್ಗೆ ಬರೆದಿರುವ ಪುಸ್ತಕಗಳು[edit | edit source]

  • ಕಲಾಂ ಮೇಷ್ಟ್ರು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು, ಮಕ್ಕಳಿಗಾಗಿ ರಚಿಸಿದ, ಒಂದು ಬಹುಮೂಲ್ಯ ಕೃತಿ. ಅದನ್ನು ರಚಿಸಿದವರು. ಪ್ರೊ. ಎಚ್. ಆರ್. ರಾಮಕೃಷ್ಣರಾವ್. : ISBN : 81-7713-199-0. ಇದರ ೧,೦೦೦ ಪ್ರತಿಗಳು ಮಾರಾಟವಾಗಿವೆ.

ಉಲ್ಲೇಖಗಳು[edit | edit source]

  1. Lua error in Module:Citation/CS1/Configuration at line 2123: attempt to index field '?' (a nil value).
  2. http://articles.economictimes.indiatimes.com/2002-06-11/news/27348497_1_nda-alliance-nda-today-president-kalam
  3. Lua error in Module:Citation/CS1/Configuration at line 2123: attempt to index field '?' (a nil value).
  4. Lua error in Module:Citation/CS1/Configuration at line 2123: attempt to index field '?' (a nil value).
  5. Lua error in Module:Citation/CS1/Configuration at line 2123: attempt to index field '?' (a nil value).
  6. Lua error in Module:Citation/CS1/Configuration at line 2123: attempt to index field '?' (a nil value).
  7. Lua error in Module:Citation/CS1/Configuration at line 2123: attempt to index field '?' (a nil value).
  8. Lua error in Module:Citation/CS1/Configuration at line 2123: attempt to index field '?' (a nil value).
  9. Lua error in Module:Citation/CS1/Configuration at line 2123: attempt to index field '?' (a nil value).
  10. Lua error in Module:Citation/CS1/Configuration at line 2123: attempt to index field '?' (a nil value).
  11. Lua error in Module:Citation/CS1/Configuration at line 2123: attempt to index field '?' (a nil value).
  12. Lua error in Module:Citation/CS1/Configuration at line 2123: attempt to index field '?' (a nil value).
  13. Lua error in Module:Citation/CS1/Configuration at line 2123: attempt to index field '?' (a nil value).
  14. Lua error in Module:Citation/CS1/Configuration at line 2123: attempt to index field '?' (a nil value).
  15. 15.0 15.1 15.2 Lua error in Module:Citation/CS1/Configuration at line 2123: attempt to index field '?' (a nil value).
  16. Press Information Bureau, Government of India. 1 March 2012. Archived from the original on 8 June 2010.
  17. List of recipients of Bharat Ratna-
  18. Lua error in Module:Citation/CS1/Configuration at line 2123: attempt to index field '?' (a nil value).
  19. 19.0 19.1 Lua error in Module:Citation/CS1/Configuration at line 2123: attempt to index field '?' (a nil value).
  20. http://www.abdulkalam.nic.in/fluid.html
  21. http://books.google.co.in/books?id=c3qmIZtWUjAC&redir_esc=y
  22. http://books.google.co.in/books?id=pCN7NwAACAAJ&dq=vision+2020+abdul+kalam&source=bl&ots=faaj8bIMlB&sig=0FVR5Gikrl7NhVeIl12pSOrntp4&hl=en&sa=X&ei=LTb2T7mML5Se8QS_4J3YBg&redir_esc=y
  23. http://books.google.co.in/books?id=kypuAAAAMAAJ&q=ignited+minds&dq=ignited+minds&source=bl&ots=ez0QmBHU9X&sig=0TzcmzgctsyVAkxqJ4Ykxzkgvho&hl=en&sa=X&ei=azn2T4fVAYWe8gSQ_pntBg&redir_esc=y
  24. http://www.abdulkalam.nic.in/envisioning.html
  25. http://www.abdulkalam.nic.in/my_journey.html
  26. www.abdulkalam.nic.in/the_life_tree.html
  27. http://www.abdulkalam.nic.in/children_ask.html
  28. BBC. Abdul Kalam: People’s President, extraordinary Indian By Shashi Tharoor Indian parliamentarian
  29. ಮರಣದ ಬಗ್ಗೆ ಒನ್ ಇಂಡಿಯಾದಲ್ಲಿ ಬಂದ ವರದಿ.[1]
  30. oneindia.com, July 30, 2015,'ಮಣ್ಣಲ್ಲಿ ಮಣ್ಣಾದ ಕ್ಷಿಪಣಿ ಮಾನವ ಡಾ. ಕಲಾಂ'

Template:ಭಾರತದ ರಾಷ್ಟ್ರಪತಿಗಳು Template:Includes Wikisource ವರ್ಗ:ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ವರ್ಗ:ಭಾರತದ ರಾಷ್ಟ್ರಪತಿಗಳು ವರ್ಗ:ಭಾರತ ರತ್ನ ಪುರಸ್ಕೃತರು